News Karnataka Kannada
Tuesday, April 30 2024
ಬೆಂಗಳೂರು ನಗರ

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಸಿಹಿಸುದ್ದಿ ನೀಡಿದ ಡಾ.ಕೆ. ಸುಧಾಕರ್

Dr. Sudhakar
Photo Credit :

ಬೆಂಗಳೂರು : ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದು, 6 ತಿಂಗಳ ಅವಧಿಗೆ ಸೇವೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಇಲಾಖೆ ಸೇವೆಗೆ ತೆಗೆದುಕೊಂಡಿದ್ದ ನೌಕರರ ಅವಧಿಯನ್ನು ಕೊರೊನಾ ಇಲ್ಲದಿದ್ದರೂ 18 ತಿಂಗಳು ಮುಂದುವರೆಸಿದ್ದೆವು.ಇದೀಗ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು ಮುಂದುವರೆಸಲು ಕೇಳಿದ್ದೇವೆ. ಆರ್ಥಿಕ ಇಲಾಖೆ ಅನುಮತಿ ನೀಡಿದರೆ ಮುಂದುವರೆಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ಕುರಿತು ಆತಂಕ ಪಡಬೇಕಾದ ಪರಿಸ್ಥಿತಿ ಇಲ್ಲ.ತಕ್ಷಣ ಕಠಿಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿಯೂ ವೈಜ್ಞಾನಿಕವಾಗಿ ಕಂಡುಬಂದಿಲ್ಲ. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು