ಬೆಂಗಳೂರು: ಹಾಸನದ ಗುಡ್ಡೇನಹಳ್ಳಿಯಲ್ಲಿ ನಡೆದ ಗೃಹಪ್ರವೇಶವೊಂದರಲ್ಲಿ ಊಟ ಸೇವಿಸಿದ 40ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ಭಾನುವಾರ ನಡೆದಿದೆ. ಅಸ್ವಸ್ಥರಾದವರನ್ನು ಹಾಸನ ಇನ್ ಸ್ಟಿಟ್ಯೂಟ್ ಆಪ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ಸೇರಿಸಲಾಗಿದೆ.
ಭಾನುವಾರ ರಾತ್ರಿ ಗೃಹಪ್ರವೇಶದ ಮನೆಯಲ್ಲಿ ಊಟ ಮಾಡಿದ ಬಳಿಕ ಈ ಅವಘಡ ಸಂಭವಿಸಿದೆ.
ಎಲ್ಲ ಅಸ್ವಸ್ಥರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಆಹಾರವನ್ನು ಸಂಗ್ರಹಿಸಿ ಪರೀಕ್ಷೆ ನಡೆಸುತ್ತಿದೆ. ಅಧಿಕಾರಿಗಳು ಹಳ್ಳಿಗೆ ಭೇಟಿ ನೀಡುತ್ತಿದ್ದಾರೆ.