ಗೃಹ ಸಚಿವರು ತಮಗೆ ಎರಡೆರಡು ನಾಲಿಗೆ ಇದೆ ಎಂದು ಸಾಬೀತು ಪಡಿಸಿದ್ದಾರೆ:ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಎದೆತಟ್ಟಿ ಹೇಳಿದ್ದ ಗೃಹ ಸಚಿವರು ಇಂದು ನಡು ಬಗ್ಗಿಸಿ ಪಿಎಸೈ ನೇಮಕಾತಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ, ಆದ್ದರಿಂದ ನೇಮಕಾತಿ ರದ್ದು ಮಾಡಿ ಮರು ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಈ ಮೂಲಕ ಹಾವಿಗೂ ಎರಡು ನಾಲಿಗೆ ಇದೆ, ಹಾವಿನ ಪುರದವರಿಗೂ ಕೂಡ ಎರಡೆರಡು ನಾಲಿಗೆ ಇದೆ ಎಂದು ಸಾಬೀತು ಪಡಿಸಿದಂತಾಯಿತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಕೋಟಿ ಕೋಟಿ ಭಾರಿ ಅವ್ಯವಹಾರಗಳು ನಡೆದಿವೆ ಎಂದು ಎಳೆಎಳೆಯಾಗಿ ಬಿಚ್ಚಿಟ್ಟಿದ್ದೆ. ರಾಜ್ಯದ ಪ್ರಮುಖ ಪತ್ರಿಕೆಗಳು ಸರ್ಕಾರದ ಮುಖಕ್ಕೆ ರಾಚುವಂತೆ ಇಲಾಖೆಯ ಮುಖವಾಡಗಳನ್ನೇ ಧಾರಾವಾಹಿಗಳಂತೆ ಬಿಚ್ಚಿಟ್ಟಿದ್ದವು. ಆಗ ಸತ್ಯ ಹರಿಶ್ಚಂದ್ರರಂತೆ ಮಾತಾಡಿದ್ದ ಗೃಹ ಸಚಿವರು ಅಕ್ರಮವೇ ನಡೆದಿಲ್ಲ ಎಂದು ಅಧಿವೇಶನದಲ್ಲಿ ಸುಳ್ಳು ಹೇಳಿಕೆ ಕೊಟ್ಟಿದ್ದರು. ಈಗ ಸರ್ಕಾರವೇ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡ ಮೇಲೆ ಯಾವ ನೈತಿಕತೆಯ ಮೇಲೆ ಗೃಹ ಸಚಿವರು ಮುಂದುವರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಕ್ರಮ ನಡೆಸಿರುವ ಕಿಂಗ್ ಪಿನ್ ಗಳಿಗೆ ತಾಂಬೂಲು ಕೊಟ್ಟು ಕರೆಯುವ ಹಾಗೆ, ದಯವಿಟ್ಟು ವಿಚಾರಣೆಗೆ ಬನ್ನಿ ಎಂದು ಕರೆಯುವಂತಹ ಅದಕ್ಷ ಗೃಹ ಸಚಿವರನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬರುವ ಪಿಎಸೈಗಳ ನೇಮಕಾತಿಯಲ್ಲಿಯೇ ಕೋಟಿ ಕೋಟಿ ಅವ್ಯವಹಾರಗಳು ನಡೆಯುತ್ತಿದ್ದರೂ ನಿಮ್ಮ ಗಮನಕ್ಕೆ ಬಾರದೆ ಅಕ್ರಮ ನಡೆದಿದೆಯೇ? ಸ್ವಲಾಖೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ನಿಮ್ಮಿಂದ ಸಾಧ್ಯವಾಗಿಲ್ಲ ಎಂದಾದರೆ ಅಸಮರ್ಥರಾಗಿ ಮುಂದುವರೆಯಲು ನಿಮ್ಮನ್ನ ನೈತಿಕತೆ ಪ್ರಶ್ನೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಅಭ್ಯರ್ಥಿಗಳೇ ಪರೀಕ್ಷೆ ಬರೆದಿದ್ದಾರೆ. ಇಷ್ಟಕ್ಕೂ ಸರ್ಕಾರ ಮರು ಪರೀಕ್ಷೆ ನಡೆಸುವುದಾದರೇ ಪ್ರಾಮಾಣಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಯಾವ ತಪ್ಪಿಗೆ ಶಿಕ್ಷೆ ಅನುಭವಿಸಬೇಕು? ಈಗಾಗಲೇ ಮುಂದೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅಕ್ರಮ ನಡೆಯುವುದಿಲ್ಲ ಎಂಬ ಯಾವ ಮುಖವಿಟ್ಟು ಭರವಸೆ ಕೊಡುತ್ತೀರಿ? 545 ಪಿಎಸ್‌ಐ ಹುದ್ದೆಗಳಿಗೆ ರಾಜ್ಯದಲ್ಲಿ ಒಟ್ಟು 54,289 ಅಭ್ಯರ್ಥಿಗಳ ಪರೀಕ್ಷೆ ಬರೆದಿದ್ದಾರೆ. ಲಕ್ಷಾಂತರ ಅಭ್ಯರ್ಥಿಗಳು ಶುಲ್ಕ ಕಟ್ಟಿದ್ದಾರೆ. ಮತ್ತೆ ಅವರಿಂದ ಶುಲ್ಕ ಪಡೆದರೆ ಒಂದೇ ಪರೀಕ್ಷೆಗೆ ಎರಡೆರಡು ಬಾರಿ ಶುಲ್ಕ ಕಟ್ಟಬೇಕೆ? ನಿಮ್ಮ ತಪ್ಪಿಗೆ ಅಭ್ಯರ್ಥಿಗಳಿಗೆ ಬರೆ ಎಳೆಯುವಂತಾಗಲಿದೆ. ಹೀಗಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಮೊದಲ ಬಾರಿಗೆ ಅರ್ಜಿ ಶುಲ್ಕ ಕಟ್ಟಿದವರಿಗೆ ಉಚಿತ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ದಕ್ಷ, ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದ ಇಡೀ ಇಲಾಖೆಯ ಜಂಘಾಬಲವನ್ನೇ ಕುಸಿಯುವಂತೆ ಮಾಡಿದ್ದೀರಿ. ನಿಮಿಗೆ ನೈತಿಕ ರಾಜಕೀಯ ಮೌಲ್ಯವೇ ಗೊತ್ತಿಲ್ಲದಿದ್ದರೆ ಪರವಾಗಿಲ್ಲ, ಗೃಹ ಸಚಿವಸ್ಥಾನಕ್ಕೆ ತನ್ನದೇ ಆದ ಘನತೆ, ಗೌರವಗಳಿವೆ ಹೆಚ್ಚು ಮಾತಾಡದೆ ಈಶ್ವರಪ್ಪ ಮಾದರಿಯಲ್ಲಿ “ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರಾಜ್ಯಪಾಲರಿಗೆ ರಾಜೀನಾಮೆ ನೀಡಿ ಖುರ್ಚಿ ಖಾಲಿ ಮಾಡಿ ಎಂದು ಬಿ.ಕೆ.ಹರಿಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

52 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago