ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಮಾಡಿ, ಅಲ್ಲಿನ ಜನರಿಗೆ ಆಗುತ್ತಿರುವಂತಹ ನಿಜವಾದ ಸಮಸ್ಯೆಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಲಿರುವರು.
ಫೆ.20ರಂದು ಅವರು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ ವಾಸ್ತವ್ಯ ಹೂಡಲಿರುವರು. ಅವರು ಎತ್ತಿನಗಾಡಿಯಲ್ಲಿ ಗ್ರಾಮಕ್ಕೆ ತೆರಳುವರು. ಅಲ್ಲಿ ಅವರು ದಲಿತ ಕಾಲನಿಗೆ ಕೂಡ ಭೇಟಿ ನೀಡಲಿದ್ದಾರೆ. ಜನರು ಎದುರಿಸುತ್ತಿರುವಂತಹ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಿರುವರು.
ಸಂಜೆ ವೇಳೆ ಅವರು ಕಲಾವಿದರ ಜತೆಗೆ ಮಾತುಕತೆ ನಡೆಸಲಿರುವರು. ರಾತ್ರಿ ಅವರು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಉಳಿದುಕೊಳ್ಳಲಿರುವರು.
ಇದೇ ದಿನ ರಾಜ್ಯದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಗ್ರಾಮ ಭೇಟಿಯನ್ನು ಆರಂಭಿಸಲಿರುವರು. ಪ್ರತೀ ತಿಂಗಳ ಮೂರನೇ ಶನಿವಾರದಂದು ಒಂದೊಂದು ಗ್ರಾಮಕ್ಕೆ ಹೋಗಿ ಅಲ್ಲಿನ ಜನರ ಸಮಸ್ಯೆಗಳನ್ನು ತಿಳಿದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…