ಬೆಂಗಳೂರು: ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಗೊಂದಲದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವರ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬೆಂಗಳೂರಿನ ಜಯಮಹಲ್ ಬಳಿ ಇರುವ ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಗೃಹ ಸಚಿವರ ನಿವಾಸಕ್ಕೆ ಪೊಲೀಸರಿಂದ ಭಾರಿ ಭದ್ರತೆ ಕಲ್ಪಿಸಲಾಗಿದೆ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ.
ಜೆ.ಜೆ.ನಗರದಲ್ಲಿ ನಡೆದಿದ್ದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಉರ್ದು ಭಾಷೆ ಮಾತನಾಡಿಲ್ಲ ಎಂಬ ಕಾರಣಕ್ಕೆ ಚೂರಿಯಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ.
ಆತ ಒಬ್ಬ ದಲಿತ ಯುವಕ ಎಂದು ಹೇಳಿಕೆ ನೀಡಿದ್ದರು. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.