News Karnataka Kannada
Sunday, April 28 2024
ಬೆಂಗಳೂರು ನಗರ

ಚಿಂತನೆಯ ಅಭಿವ್ಯಕ್ತಿ ಮಾಧ್ಯಮ ಸಾಹಿತ್ಯ: ಬಸವರಾಜ ಬೊಮ್ಮಾಯಿ

Book Brahma
Photo Credit :

ಬೆಂಗಳೂರು : ಚಿಂತನೆಯ ಅಭಿವ್ಯಕ್ತ ಮಾಧ್ಯಮ ಸಾಹಿತ್ಯವಾಗಿದ್ದು, ಇಂದಿನ ಯುವ ಬರಹಗಾರರು ಅದನ್ನು ಅರ್ಥೈಸಿಕೊಳ್ಳುವ ಅಗತ್ಯವಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನ ನಾಗದೇವನಹಳ್ಳಿಯ ಮಾಸ್ತಿ ಭವನದಲ್ಲಿ ಏಪ್ರಿಲ್ 18, 2022ರ ಸೋಮವಾರದಂದು, ಕೋಲಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಮಾಸ್ತಿ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ ಅವರು ಉದ್ಘಾಟನಾ ನುಡಿಗಳನ್ನಾಡಿದರು.

ರಾಜ್ಯ ಅಭಿವೃದ್ಧಿಹೊಂದಲು ಕೇವಲ ಆರ್ಥಿಕ ದೃಷ್ಟಿಕೋನ ಸಾಲದು. ಸಾಹಿತ್ಯ, ಸಾಮಾಜಿಕ, ಶೈಕ್ಷಣಿಕ, ಮೌಲಿಕ ಹಾಗೂ ಆರ್ಥಿಕ, ಹೀಗೆ ಎಲ್ಲ ಆಯಾಮಗಳಲ್ಲಿ ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಶ್ರೀಮಂತವಾಗಿದೆ. ಮಾಸ್ತಿ, ಕುವೆಂಪು, ಬೆಂದ್ರೆಯವರಂತಹ ಹಿರಿಯ ಸಾಹಿತಿಗಳು ಮಾಡಿರುವ ಸಾಹಿತ್ಯ ಕೃಷಿ ಮುಂದಿನ ಪೀಳಿಗೆಗೂ ಮುಂದುವರಿಯುವ ಅಗತ್ಯತೆಯಿದೆ ಎಂದು ಅವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮಾನ್ಯ ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಮಾತನಾಡಿ, ಕನ್ನಡದ ಹೆಮ್ಮೆಯ ಸಾಹಿತಿಗಳು ಮಾಸ್ತಿ ವೆಂಕಟೇಶ ಅಯ್ಯಂಗಾರ್, ಅವರ ಹೆಸರಿನಲ್ಲಿ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂಭ್ರಮದ ವಿಚಾರ. ನಿರ್ಮಾಣದ ಪ್ರತಿ ಹಂತದಲ್ಲೂ ಸರ್ಕಾರ ಸಹಕಾರ ನೀಡಲಿದೆ ಎಂಬ ಭರವಸೆಯ ಮಾತುಗಳನ್ನಾಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಡಾ. ಚಂದ್ರಶೇಖರ ಕಂಬಾರ ಅವರ ಗೌರವ ಉಪಸ್ಥಿತಿ ಕಾರ್ಯಕ್ರಮದಲ್ಲಿತ್ತು. ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೂ ಸರ್ಕಾರಕ್ಕೂ ಇರುವ ಗಟ್ಟಿ ಸಂಬಂಧ ಬೇರೆ ಯಾವ ರಾಜ್ಯದಲ್ಲೂ ಕಾಣುವ ಕಷ್ಟಸಾಧ್ಯವಾಗಿದೆ. ಕನ್ನಡವನ್ನು ಪ್ರೋತ್ಸಾಹಿಸಲು, ಅಕಾಡಮಿಗಳು, ಸಂಸ್ಕೃತಿ ಇಲಾಖೆಗಳೂ ಇವೆ. ಮಾಸ್ತಿ ಅವರ ಹೆಸರಿನಲ್ಲಿ ಭವನ ನಿರ್ಮಿಸಿ, ಕನ್ನಡ ಸಾಹಿತ್ಯ ಅಧ್ಯಯನಕ್ಕೆ ಮತ್ತಷ್ಟು ಅವಕಾಶ ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ ಎಂದರು.

ಮಾಸ್ತಿ ಟ್ರಸ್ಟ್ ನ ಅಧ್ಯಕ್ಷರು ಮಾವಿನ ಕೆರೆ ರಂಗನಾಥ್ ಅವರು ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳನ್ನಾಡಿದರು. ಕವಿ ಬಿ.ಆರ್ ಲಕ್ಷಣ್ ರಾವ್ ಅವರು ವಂದಿಸಿದರು. ಲೇಖಕ ಎಚ್.ಎಸ್. ಸತ್ಯನಾರಾಯಣ ಅವರು ನಿರೂಪಿಸಿದರು.

ಬುಕ್ ಬ್ರಹ್ಮ ಫೇಸ್ ಬುಕ್ ಹಾಗೂ ಯೂ ಟ್ಯೂಬ್ ಪೇಜ್ ನಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರಗೊಂಡಿದೆ.

ಯೂಟ್ಯೂಬ್ ಲಿಂಕ್ :- https://www.youtube.com/watch?v=uM_lj3uEG9U

ಫೇಸ್ ಬುಕ್ ಲಿಂಕ್ :- https://www.facebook.com/BookBrahmaKannada/videos/493284159093706

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು