ಬೆಂಗಳೂರು: ಲೋಕಸಭಾ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಆರೋಗ್ಯದ ಕಡೆ ಗಮನ ಹರಿಸಿ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಗ ನಿಖಿಲ್ ಕುಮಾರಸ್ವಾಮಿ ಸಲಹೆಯನ್ನು ನೀಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರು ನಿಖಿಲ್ ಕುಮಾರಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಕಣಕ್ಕಿಳಿದಿದ್ದಾರೆ.
ರಾಜ್ಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ತುಂಬಾನೇ ಚರ್ಚೆ ಹಾಗೂ ಕುತೂಹಲಕ್ಕೆ ಒಳಗಾಗಿತ್ತು. ಇಬ್ಬರ ಪರ ಪ್ರಚಾರಗಳು ಬಿರುಸಿನಿಂದ ನಡೆಯಿತು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರು ಮಂಡ್ಯ ಸೇರಿದಂತೆ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರಗಳನ್ನು ಕೈಗೊಂಡರು.
ಮತದಾನದ ಬಳಿಕ ಇದೀಗ ಕೆಲ ದಿನಗಳಿಂದ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್ .ಡಿ.ಕುಮಾರಸ್ವಾಮಿ ಅವರು ಮೂಳೂರಿನ ಸಾಯಿರಾಧ ರೆಸಾರ್ಟ್ ನಲ್ಲಿ ಆಯುರ್ವೇದ ಚಿಕಿತ್ಸೆ ಪಡೆದು ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲು ಚಿಕ್ಕಮಗಳೂರು ಕಡೆ ಪ್ರಯಾಣ ಬೆಳೆಸಿದ್ದಾರೆ.
ಈ ಸಂಬಂಧ ಮಾತನಾಡಿದ ನಿಖಿಲ್, ತಂದೆಗೆ ಲೋಕಸಭಾ ಚುನಾವಣೆಯ ಬಗ್ಗೆ ಚಿಂತಿಸಬೇಡಿ. ಆರೋಗ್ಯದ ಕಡೆ ಗಮನ ಹರಿಸಿ ಎಂದು ಹೇಳಿದ್ದಾರೆ.
ವರದಿ ಪ್ರಕಾರ ಆಯುರ್ವೇದ ಚಿಕಿತ್ಸೆ ಪಡೆದ ಬಳಿಕ ಸಿಎಂ ಕುಮಾರಸ್ವಾಮಿ ಅವರು ತೂಕವನ್ನು ಇಳಿಸಿಕೊಂಡಿದ್ದಾರೆ.
23ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.