News Karnataka Kannada
Monday, May 06 2024
ಬೆಂಗಳೂರು ನಗರ

ಛತ್ರಪತಿ ಶಿವಾಜಿ ಭಾರತದ ಸ್ವಾಭಿಮಾನದ ಪ್ರತೀಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Bommai
Photo Credit :

ಬೆಂಗಳೂರು : ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ ಹಾಗೂ ಭಾರತದ ಏಕತೆ, ಅಖಂಡತೆಯ ಪ್ರತೀಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ರಕ್ಷಣೆ ಮಾಡಿದರು. ಅವರ ದಿಟ್ಟತನದಿಂದ ಭಾರತದಲ್ಲಿ ಹಿಂದೂ ಸಾಮ್ರಾಜ್ಯ ಗಟ್ಟಿಯಾಗಿ ಉಳಿಯಲು ಸಾಧ್ಯವಾಯಿತು. ಸಮಾಜದ ಎಲ್ಲಾ ವರ್ಗದ ಜನರನ್ನೂ ಸಮಾನವಾಗಿ ನೋಡಿದ ಶಿವಾಜಿಯವರನ್ನು ಪ್ರತಿಯೊಬ್ಬ ಭಾರತೀಯನೂ ಪೂಜನೀಯ ಭಾವದಿಂದ ನೋಡುತ್ತಾನೆ. ಅವರ ಹೆಸರಿನಲ್ಲಿಯೇ ಸ್ಪೂರ್ತಿ, ಶಕ್ತಿ ಹಾಗೂ ಪ್ರೇರಣೆ ನೀಡುತ್ತದೆ. ಶಿವಾಜಿ ಮಹಾರಾಜರ ಅಭಿಮಾನದ ಸಂಕೇತವಾಗಿ ಜನ್ಮದಿನವನ್ನು ಆಚರಿಸಲಾಗಿದೆ.

ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಹಾಗೂ ರಾಷ್ಟ್ರಭಕ್ತಿಯ ಭಾವನೆ ತುಂಬುವ ಕೆಲಸವನ್ನು ಮಾಡಲಾಗುವುದು. ಮರಾಠ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದ್ದು, ಶ್ರೀ ಮಾಣಿಕ್ ರಾವ್ ಮೂಳೆಯವರನ್ನು ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಧ್ವನಿಯಿಲ್ಲದ ದುರ್ಬಲ ವರ್ಗಗಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಉಚ್ಛನ್ಯಾಯಾಲಯದ ಆದೇಶದ ಪರಿಪಾಲನೆ ಎಲ್ಲರ ಕರ್ತವ್ಯ:
ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗುತ್ತಿರುವ ಬಗ್ಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿಗಳು, ಉಚ್ಛನ್ಯಾಯಾಲಯದ ಆದೇಶದ ಪರಿಪಾಲನೆ ಎಲ್ಲರ ಕರ್ತವ್ಯ. ಹೊರಗಿನವರಿಂದ ಎಲ್ಲ ಸಮಸ್ಯೆಗಳು ಉಂಟಾಗುತ್ತಿದೆ. ಹೊರಗಿನವರು ಅನಗತ್ಯ ಪ್ರವೇಶದಿಂದಾಗಿ ಎಲ್ಲ ಗೊಂದಲಗಳು ಏಳುತ್ತಿವೆ. ಶಾಲಾ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳೇ ಈ ವಿಷಯವನ್ನು ಬಗೆಹರಿಸಿಕೊಳ್ಳುತ್ತಾರೆ. ವಾತಾವರಣ ತಿಳಿಯಾಗಬೇಕಿದೆ.ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಎಲ್ಲಾ ಮಾಹಿತಿಗಳನ್ನು ಪಡೆಯುತ್ತಿದ್ದೇನೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು