ಜನರ ಆಶಯ ಸಾಕಾರಗೊಳಿಸುವುದು ಜನಪ್ರತಿನಿಧಿಗಳ ಕರ್ತವ್ಯ : ಜೆ. ಸಿ. ಮಧುಸ್ವಾಮಿ

ಬೆಂಗಳೂರು: ಜನರ ನಿರೀಕ್ಷೆಯನ್ನು ಕಾನೂನು ಚೌಕಟ್ಟಿನಲ್ಲಿ ಹಣಕಾಸಿನ ಮಿತಿಯೊಳಗೆ ಸಾಕಾರಗೊಳಿಸುವುದು ಎಲ್ಲ ಜನಪ್ರತಿನಿಧಿಗಳ ಆದ್ಯ ಕರ್ತವ್ಯವೆಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ. ಸಿ. ಮಧುಸ್ವಾಮಿ ತಿಳಿಸಿದರು

ವಿಕಾಸಸೌಧದಲ್ಲಿ ಮಾನ್ಯ ಶಾಸಕರುಗಳಿಗೆ ಹಮ್ಮಿಕೊಳ್ಳಲಾದ ಎರಡು ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಜನಪ್ರತಿನಿಧಿಗಳಿಗೆ ಜನರ ಸೇವೆ ಮಾಡಲು ಒಂದು ಸದಾವಕಾಶ ಸಿಕ್ಕಿದೆ ಇದನ್ನು ಇವರು ಹೆಚ್ಚು ಜವಾಬ್ದಾರಿಯಿಂದ ನಿರ್ವಹಿಸಿ ಜನರ ನಿರೀಕ್ಷೆಯನ್ನು ತಲುಪಬೇಕು ಅಧಿವೇಶನದಲ್ಲಿ ನಡೆಯುವ ಚರ್ಚೆ ವಾದಗಳನ್ನು ಸ್ವೀಕರಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು ಅಲ್ಲದೆ ನಿಖರ ವಿಷಯ ಹಾಗೂ ಮಾಹಿತಿಯೊಂದಿಗೆ ಸದನಕ್ಕೆ ಆಗಮಿಸಿ ವಿಷಯ ಮಂಡನೆ ಮಾಡಬೇಕು.  ಸದನದ ಘನತೆಯನ್ನು ಉಭಯ ಸದನಗಳ ಸದಸ್ಯರು ಕಾಪಾಡಿಕೊಳ್ಳಬೇಕು.ನಾಯಕತ್ವ ಟೊಳ್ಳಾದರೆ ಆದರೆ ಇಡೀ ವ್ಯವಸ್ಥೆ ಟೊಳ್ಳಾದಂತೆ.  ಶಾಸನ ರಚನೆಯನ್ನು ವಿವೇಚನೆಯಿಂದ ಅಭಿವೃದ್ಧಿಗೆ ಪೂರಕವಾಗಿ ಮಾಡಬೇಕು. ಎಲ್ಲರೂ ರಾಜ್ಯದ ಹಿತಾಸಕ್ತಿಯನ್ನು ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ಆಯ್ಕೆಯಾದ ಪ್ರತಿಯೊಬ್ಬ ಸದಸ್ಯರು ಕಲಾಪಗಳಲ್ಲಿ ತಪ್ಪದೇ ಭಾಗವಹಿಸಬೇಕು.ಅಧಿವೇಶನದಲ್ಲಿ ಇರಬೇಕಾದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು.ಲೆಕ್ಕಪತ್ರಗಳು ಬಜೆಟ್ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಜ್ಞಾನ ಹೊಂದಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯ.ಶಾಸಕರುಗಳಿಗೆ ಇಂದು ಮತ್ತು ನಾಳೆ ಎರಡು ದಿನಗಳು ತರಬೇತಿ ಶಿಬಿರ ನಡೆಯಲಿದೆ, ಈ ಶಿಬಿರದಲ್ಲಿ ಚುನಾಯಿತರಾದ ಎಲ್ಲಾ ಶಾಸಕರು ತಪ್ಪದೆ ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, ವಿಧೇಯಕಗಳು ಹಾಗೂ ವಿತ್ತೀಯ ಕಲಾಪಗಳ ಬಗ್ಗೆ ಬೆಳಕು ಚೆಲ್ಲಿದರು ಅಲ್ಲದೆ ರಾಜ್ಯದ ಅಭಿವೃದ್ಧಿಯ ಪಾಲುದಾರನಾಗಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪಾತ್ರದ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ,  ಮಾಜಿ ಸಭಾಪತಿಗಳಾದ ಡಿಎಚ್ ಶಂಕರಮೂರ್ತಿ, ಮಾಜಿ ಸಭಾಪತಿಗಳಾದ ಬಿ.ಎಲ್ ಶಂಕರ್,  ಶಾಸಕರಾದ ಕೆ.ಆರ್. ರಮೇಶ್ ಕುಮಾರ್, ಕೆ. ಟಿ. ಶ್ರೀಕಂಠೇಗೌಡ ಮಾಜಿ ಶಾಸಕರಾದ   ಗೋ ಮಧುಸೂದನ್ ಉಪಸ್ಥಿತರಿದ್ದರು.

Swathi MG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

18 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

27 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

30 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

42 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

45 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

45 mins ago