ಬೆಂಗಳೂರು : ರಾಜ್ಯದಲ್ಲಿ ಜನವರಿ 31 ರಿಂದ ನೈಟ್ ಕರ್ಪ್ಯೂ ನಿಯಮಗಳನ್ನು ಹಿಂಪಡೆಯಲಾಗಿದೆ. ಬೆಂಗಳೂರಿನಲ್ಲಿ ಸೋಂವಾರದಿಂದ ಕೋವಿಡ್ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಇಂದು ಕೋವಿಡ್ ತಜ್ಞರ ಜೊತೆಗೆ ಸಿಎಂ ಬೊಮ್ಮಾಯಿ ನಡೆಸಿದ ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಅರ್. ಅಶೋಕ್, ರಾಜ್ಯದಲ್ಲಿ ಜನವರಿ 31 ರಿಂದ ನೈಟ್ ಕರ್ಪ್ಯೂ ಹಿಂಪಡೆಯಲಾಗಿದೆ.ಚಿತ್ರಮಂದಿಗಳಲ್ಲಿ ಶೇ. 50 ರಷ್ಟು ಸೀಟು ಭರ್ತಿಗೆ ಅವಕಾಶ, ಹೋಟೆಲ್, ಪಬ್ ಬಾರ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲಾಗಿದೆ. ಕಚೇರಿಗಳಲ್ಲಿ ಶೇ. 100 ರಷ್ಟು ನೌಕರರಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಸಾರಿಗೆಯಲ್ಲಿ ಸಿಟ್ಟಿಂಗ್ ಕೆಪ್ಯಾಸಿಟಿ ಮಾತ್ರ ಭರ್ತಿ, ಬೆಂಗಳೂರಿನಲ್ಲಿ ಶಾಲೆಗಳ ಅರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಶೇ. 50 ರಷ್ಟು ಮಂದಿಗೆ ಮಾತ್ರ ಅವಕಾಶ.