News Karnataka Kannada
Friday, May 17 2024
ಬೆಂಗಳೂರು ನಗರ

ಜನ್ಮದಿನ ಆಚರಿಸದಂತೆ ಅಭಿಮಾನಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

Photo Credit :

ಜನ್ಮದಿನ ಆಚರಿಸದಂತೆ ಅಭಿಮಾನಿಗಳಿಗೆ  ಕೆಪಿಸಿಸಿ ಅಧ್ಯಕ್ಷ ಡಿಕೆಶಿ  ಮನವಿ

ಬೆಂಗಳೂರು, ; ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ಅವರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಗೆ ಈ ಕುರಿತು ಮನವಿ ಮಾಡಿದ್ದಾರೆ. ಮೇ 15ರಂದು ಡಿ. ಕೆ. ಶಿವಕುಮಾರ್ 59ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದರೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.
‘ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.’ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೊರೊನಾ ರುದ್ರತಾಂಡವ ಆಡುತ್ತಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ವಿಹಿತವಲ್ಲ. ಹೀಗಾಗಿ ಈ ಬಾರಿ ನಾನೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ’ ಎಂದು ಸೂಚಿಸಿದ್ದಾರೆ.
‘ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು