ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು.
ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ ಮತ್ತೊಮ್ಮೆ ಸಭೆ ಮಾಡುತ್ತಾರೆ. ಮೂರನೇ ಅಲೆ ಬರುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರನ್ನು ರೆಡ್ ಜೋನ್ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಸಿಎಂ ಮತ್ತೊಮ್ಮೆ ಸಭೆ ಕರೆದು ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಮಾಡಬಹುದು. ತಜ್ಞರ ಸಮಿತಿ ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿಮಾಡಲಾಗುತ್ತದೆ ಎಂದರು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ನವರು ಏನು ಮಾಡುತ್ತಾರೆನ್ನುವುದು ನಮಗೆ ಇಂಪಾರ್ಟೆಂಟ್ ಅಲ್ಲ. ನಮಗೆ ಇರುವವರು ರಾಜ್ಯದ ಆರೂವರೆ ಕೋಟಿ ಜನರ ಜೀವ ಕಾಪಾಡುವುದು. ನಮಗೆ ಯಾವುದೇ ರ್ಯಾಲಿ, ಸಭೆ ಬಗ್ಗೆ ತಲೆಯಲ್ಲಿಲ್ಲ. ಹೀಗಾಗಿ ಜನವರಿ 4 ಅಥವಾ 5 ರಂದು ಸಭೆ ಮಾಡಿ ಕೊವೀಡ್ ತಡೆಗೆ ಬಿಗಿ ಟಫ್ ರೂಲ್ಸ್ ಜಾರಿ ಮಾಡುತ್ತೇವೆ ಎಂದರು.
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…