News Karnataka Kannada
Sunday, May 12 2024
ಬೆಂಗಳೂರು ನಗರ

ಜಮೀನಿಗಾಗಿ ತಂದೆಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ

Man murdered over girl's love affair
Photo Credit : IANS

ಬೆಂಗಳೂರು : 21 ಗುಂಟೆ ಜಮೀನಿಗಾಗಿ ಮಗನೇ  ತಂದೆಯ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ  ಹೊರ ವಲಯದ ಬನ್ನೇರುಘಟ್ಟದಲ್ಲಿ ಕೊಲೆ ನಡೆದಿದೆ. ಕೊರಟಗೆರೆ ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ.

ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು, ಆಸ್ತಿ ಹಂಚಿಕೆ ವೇಳೆ ಮಡದಿಯರಿಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಹಿನ್ನೆಲೆ ಪತ್ನಿ ಯಶೋಧಾ ಮತ್ತು ಮಗ ನಿಖಿಲ್ ಕೊಲೆಗೆ ಸಂಚು ರೂಪಿಸಿದ್ದರು. ಸಂಚಿನಂತೆ ಚನ್ನಿಗರಾಯಪ್ಪನನ್ನು ಅಪಹರಿಸಿ, ಕೈ ಕಾಲು ಕಟ್ಟಿ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ತದನಂತರ ದೇಹವನ್ನು ಗುರುತು ಸಿಗದ ರೀತಿಯಲ್ಲಿ ಸುಟ್ಟು ಪರಾರಿಯಾಗಿದ್ದರು. ಮೃತದೇಹ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚನ್ನಿಗರಾಯಪ್ಪ ಪತ್ನಿ ಯಶೋಧ , ಮಗ ನಿಖಿಲ್, ಮಂಜುನಾಥ್, ವಿಶ್ವಾಸ್ ಬಂಧಿತ ಆರೋಪಿಗಳು. ಸದ್ಯ ಪ್ರಕರಣ ದಾಖಲಿಸಿ ಕೊಂಡಿರುವ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು