ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ಬದಲಾಯಿಸಲಿದ್ದಾರೆ.
ಪಕ್ಷದ ಹೈಕಮಾಂಡ್ ನಿಂದ ಬಂದ ಸೂಚನೆ ಮೇರೆಗೆ ಈ ವರ್ಗಾವಣೆ ಮಾಡಲಾಗುತ್ತಿದೆ. ಕೆಲವು ಸಚಿವರುಗಳು ತಮ್ಮ ಸ್ವ ಜಿಲ್ಲೆಯಲ್ಲೇ ಉಸ್ತುವಾರಿಯಾಗಿದ್ದು, ಇದರಿಂದ ಪಕ್ಷದಲ್ಲಿ ಏಕವ್ಯಕ್ತಿ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಪಕ್ಷವು ಹೇಳಿದೆ.
ಕೆಲವು ಉಸ್ತುವಾರಿ ಸಚಿವರುಗಳು ತಮ್ಮ ಅಧಿಕಾರವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ತಮ್ಮದೇ ಆಗಿರುವ ಪ್ರಬಲ ಗುಂಪನ್ನು ಕಟ್ಟುಕೊಂಡಿದ್ದಾರೆ ಎಂದು ಬಿಜೆಪಿಯ ಒಳಗಿನ ಮೂಲಗಳು ಹೇಳಿವೆ.
ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಲಿರುವರು ಮತ್ತು ಕೆ.ಎಸ್. ಈಶ್ವರಪ್ಪ ಅವರು ಧಾರವಾಡ ಜಿಲ್ಲಾ ಉಸ್ತುವಾರಿಯಾಗುವರು.