News Karnataka Kannada
Monday, April 29 2024
ಬೆಂಗಳೂರು ನಗರ

ಜಿಲ್ಲೆಗೊಂದು ಗೋಶಾಲೆ ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ

Shivamogga: Government commited to provide financial aid says P Chavan
Photo Credit :

ಬೆಂಗಳೂರು. ಏ.6 : ಜೂನ್-23ರ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲೆಗೊಂದು ಗೋಶಾಲೆ ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಗುಡುಗಿದ್ದಾರೆ.

ವಿಕಾಸಸೌಧದಲ್ಲಿ ಪಶುಸಂಗೋಪನೆ ಇಲಾಖೆ ಆಯುಕ್ತರು, ನಿರ್ದೇಶಕರು ಮತ್ತು ಉಪ ನಿರ್ದೇಶಕರೊಂದಿಗೆ ನಡೆದ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಗೊಂದು ಗೋಶಾಲೆ ತೆರೆಯುವಲ್ಲಿ ಅಧಿಕಾರಿಗಳು ಮಾಡುತ್ತಿರುವ ವಿಳಂಬವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಪ್ರತಿ ಜಿಲ್ಲಾಯಲ್ಲಿ ಜಿಲ್ಲಾಗೊಂದು ಗೋಶಾಲೆ ಅನುಷ್ಠಾನ ಯಾವ ಹಂತದಲ್ಲಿದೆ ಎಂದು ಅಕಾರಿಗಳಿಂದ ಮಾಹಿತಿ ಪಡೆದರು. ಯೋಜನೆ ಅನುಷ್ಠಾನದಲ್ಲಿ ತೊಡಕುಗಳಿದ್ದರೂ ತಕ್ಷಣಕ್ಕೆ ಗಮನಕ್ಕೆ ತರಲು ಅವರು ತಿಳಿಸಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದಾಗಿ ನಿಂದ ರಾಜ್ಯದಲ್ಲಿ ಗೋಶಾಲೆಗಳು ಕ್ರಮೇಣ ಭರ್ತಿಯಾಗುತ್ತಿವೆ. ಹೀಗಾಗಿ ಆದ್ಯತೆಯ ಮೇಲೆ ಗೋಶಾಲೆಗಳ ನಿರ್ಮಾಣ ಮಾಡಬೇಕು ಎಂದು ಹೇಳಿದರು. ಅಧಿಕಾರಿಗಳು ತೋರುತ್ತಿರುವ ದಿವ್ಯ ನಿರ್ಲಕ್ಷ ಹಾಗೂ ಮೈಗಳ್ಳತನ ಜಿಲ್ಲಾಗೊಂದು ಗೋಶಾಲೆ ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ತಂದೊಡ್ಡುತ್ತಿದೆ. ಸೂಚನೆಯನ್ನು ಅರ್ಥ ಮಾಡಿಕೊಳ್ಳದ ಅಧಿಕಾರಿಗಳ ಮೇಲೆ ಸಚಿವರು ಹರಿಹಾಯ್ದರು.

ಬೇಸಿಗೆಯ ಧಗೆ ಹೆಚ್ಚಾಗುತ್ತಿರುವುದರಿಂದ ಗೋಶಾಲೆಗಳಲ್ಲಿ ಮೇವು, ನೀರು ಹಾಗೂ ಔಷಧಿಗಳ ಕೊರತೆ ಬಗ್ಗೆ ಮಾಹಿತಿ ಪಡೆದು ಸಮರ್ಪಕ ವ್ಯವಸ್ಥೆ ಮಾಡುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ದೇಸಿ ತಳಿಗಳ ಸಂರಕ್ಷಣೆ ಹಾಗೂ ಗೋಹತ್ಯೆಯ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ಅಗತ್ಯ ಬಿದ್ದರೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಣಿ ಕಲ್ಯಾಣ ಸಹಾಯವಾಣಿ ಅತ್ಯದ್ಭುತ ವಾಗಿ ಕಾರ್ಯನಿರ್ವಹಿಸುತ್ತಿದ್ದು ಮಾತು ಬಾರದ ಪ್ರಾಣಿಗಳಿಗೆ ಧ್ವನಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕೇಂದ್ರಕ್ಕೆ ಬರುವ ಕರೆಗಳು ತಕ್ಷಣದಲ್ಲಿ ಹತ್ತಿರದ ಪಶು ವೈದ್ಯಾಧಿಕಾರಿ ಗಳಿಗೆ ರವಾನೆ ಅಗುತ್ತಿದ್ದು ಸಕಾಲದಲ್ಲಿ ಮೂಕ ಪ್ರಾಣಿಗಳಿಗೆ ಚಿಕಿತ್ಸೆ ದೊರೆಯುತ್ತಿದೆ ಎಂದರು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಸಲ್ಮ ಫಹಿಂ, ಆಯುಕ್ತ ಬಸವ ರಾಜೇಂದ್ರ, ನಿರ್ದೇಶಕ ಮಂಜುನಾಥ್ ಪಾಳೇಗಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು