ಬೆಂಗಳೂರು : ಸದಾ ಒಂದಲ್ಲ ಒಂದು ಕಾರಣಕ್ಕೆ ಜೆಡಿಎಸ್ ನ್ನು ಜರೆಯುವ ಯುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿಯಲ್ಲಿ ಅಶೋಕ್ ಪೂಜಾರಿ ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನ ಅಸ್ತಿತ್ವವೇ ಇಲ್ಲ, ಅದು ಮುಳುಗುವ ಹಡಗು. ಜೆಡಿಎಸ್ ನಲ್ಲಿದ್ದ ಅಶೋಕ್ ಪೂಜಾರಿಯವರಿಂದ ಸ್ವಲ್ಪ ಮಟ್ಟಿಗೆ ಪಕ್ಷ ಸದ್ದು ಮಾಡುತ್ತಿತ್ತು. ಈಗ ಅವರು, ಅಧಿಕೃತವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ಅವರ ರಾಜಕೀಯ ಭವಿಷ್ಯಕ್ಕೂ ನಮ್ಮ ಪಕ್ಷಕ್ಕೂ ಶಕ್ತಿ ಬಂದಿದೆ ಎಂದಿದ್ದರು.
ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಸರಣಿ ಟ್ವೀಟ್ ಗಳ ಮೂಲಕ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಮುಳುಗುವ ಪಕ್ಷವಾ, ತೇಲುವ ಪಕ್ಷವಾ ಎಂದು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನತೆ ತೋರಿಸಿಕೊಡುತ್ತಾರೆ. ಅಲ್ಲಿಯವರೆಗೂ ಸಿದ್ದಸೂತ್ರಧಾರನ ಆಪರೇಷನ್ ಹಸ್ತ ನಡೆಯುತ್ತಲೇ ಇರುತ್ತದೆ, ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ.
ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ ಎಂದು ಕಟುವಾಗಿ ಟೀಕಿಸಿದ್ದಾರೆ.
ಸದ್ಯ ಹೆಚ್ಡಿಕೆಯ ಕಠಿಣ ಟಾಂಗ್ ಗಳಿಗೆ ತತ್ತರಿಸಿರುವ ಸಿದ್ದರಾಮಯ್ಯ ಮುಂದೇನು ಹೇಳಿಕೆ ನೀಡುತ್ತಾರೆ ಎಂದು ಜನ ಕಾಯುತ್ತಿದ್ದಾರೆ. ಸದಾ ಜೆಡಿಎಸ್ ಮೇಲೆಯೇ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಅವರ ಉದ್ದೇಶಗಳೇನು ಎಂಬುದೇ ಅರ್ಥವಾಗುತ್ತಿಲ್ಲ.
ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. 1/4
— H D Kumaraswamy (@hd_kumaraswamy) December 22, 2021