News Karnataka Kannada
Monday, May 20 2024
ಬೆಂಗಳೂರು ನಗರ

ಜೆ ಪಿ ನಗರ ಜೋಡಿ ಕೊಲೆ ; ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೋಲೀಸ್‌

Photo Credit :

 ಜೆ ಪಿ ನಗರ  ಜೋಡಿ ಕೊಲೆ ; ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೋಲೀಸ್‌

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಕಿ ಗನ್ ಸದ್ದು ಮಾಡಿದೆ. ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಅಲಿಯಾಸ್ ಅಂಬಾರಿ ಮೇಲೆ ಇನ್ಸ್‌ಪೆಕ್ಟರ್ ಕಿಶೋರ್‌ ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಆರೋಪಿ ಮಂಜುನಾಥ್​ನನ್ನು ಸೆರೆ ಹಿಡಿಯಲಾಗಿದೆ.
ಮನೆಯಲ್ಲಿ ಇದ್ದ ಹಣ ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಕೇಸ್ ಸಂಬಂಧ ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಆರೋಪಿ ಪರಾರಿಗೆ ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಕಿಶೋರ್‌ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಮಂಜುನಾಥ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿವೆ.
ಏಪ್ರಿಲ್ 7 ರಂದು ಜೆಪಿ ನಗರದ 7 ನೇ ಹಂತದಲ್ಲಿನ ಮನೆಯಲ್ಲಿ ಮಮತಾ ಬಸು ಮತ್ತು ದೇವ ವ್ರಥಾ ಮೆಹರ(41) ಎಂಬುವವರ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಸದ್ಯ ಈಗ ಈ ಕೊಲೆ ಆರೋಪಿಯ ಬಂಧನವಾಗಿದೆ. ಮೃತ ಮಮತಾ ಬಸು ಬೆಂಗಳೂರಿನಲ್ಲಿ ಕಳೆದ 20 ವರ್ಷದಿಂದ ನೆಲೆಸಿದ್ದರು. ಅವರ ಮಗ ದೀಪ್ ದೇವ್ ಬಸು ಬೇರೆ ಮನೆಯಲ್ಲಿ ವಾಸವಾಗಿದ್ದಾರೆ. ಮಗನ ಸ್ನೇಹಿತ ಮೃತ ದೇವ ವ್ರಥಾ, ಕಳೆದ 20 ದಿನಗಳಿಂದ ಮಮತಾರವರ ಮನೆಯಲ್ಲಿ ವಾಸವಾಗಿದ್ದರು.
ದೇವ ವ್ರಥಾ ಲಾಕ್​ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದರು. ಇತ್ತೀಚೆಗೆ ಖಾಸಗಿ ಕಂಪನಿಯಲ್ಲಿ ಕೆಲಸ ಸಿಕ್ಕಿತ್ತು. ಅದಕ್ಕಾಗಿ ಸ್ನೇಹಿತನ ತಾಯಿ ಮಮತಾರ ಮನೆಯಲ್ಲಿ ವಾಸವಾಗಿದ್ದರು. ಘಟನಾ ದಿನ ರಾತ್ರಿ 8:30 ರ ವರೆಗೂ ಇದೇ ಮನೆಯಲ್ಲಿದ್ದ ಮಗ ದೀಪ್ ದೇವ್ ಬಸು ಊಟ ಮುಗಿಸಿ ನಂತರ ತನ್ನ ಮನೆಗೆ ತೆರಳಿದ್ದರು. ಅದೇ ದಿನ ತಡರಾತ್ರಿ 1:30 ರ ಸಮಯದಲ್ಲಿ ಡಬಲ್ ಮರ್ಡರ್ ನಡೆದಿದೆ. ದೇವ ವ್ರಥಾರ ಶವ ಮನೆಯ ಸ್ಟೋರ್ ರೂಂನಲ್ಲಿ ಪತ್ತೆಯಾಗಿದ್ದು ಮೊದಲನೆ ಮಹಡಿಯಲ್ಲಿ ಮಮತಾ ಬಸುರವರ ಶವ ದೊರೆತಿತ್ತು. ಚಾಕುವಿನಿಂದ ಇರಿದು ಇಬ್ಬರನ್ನೂ ಆರೋಪಿ ಮಂಜುನಾಥ್ ಕೊಲೆ ಮಾಡಿದ್ದರು.
ಏಪ್ರಿಲ್ 8 ರಂದು ಬೆಳಿಗ್ಗೆ ಮನೆಗೆಲಸದಾಕೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿತ್ತು. ಕೊಲೆಗೈದ ಬಳಿಕ ಮನೆಯಲ್ಲಿದ್ದ ಸಿಸಿ ಟಿವಿಯ ಡಿವಿಆರ್​ನ್ನ ಕದ್ದೊಯ್ದಿದ್ದ ಆರೋಪಿ ಮಂಜುನಾಥ್, ಬೆಲೆಬಾಳುವ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಐಟಂಗಳನ್ನ ಕದ್ದಿದ್ದ. ಈ ಬಗ್ಗೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು