ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದಿರುವಂತಹ ಬಿಜೆಪಿ ಶಾಸಕರು ನಿನ್ನೆ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಮಂತ್ರಿಮಂಡಲ ವಿಸ್ತರಣೆಯು ಜನವರಿ 14ರ ಬಳಿಕ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರಿ ಗೆದ್ದು ಬಂದಿರುವಂತಹ ಶಾಸಕರಿಗೆ ಈಗಾಗಲೇ ಸಚಿವ ಸ್ಥಾನ ನೀಡುವುದಾಗಿ ಸ್ಪಷ್ಟವಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜನವರಿ ಮೊದಲ ವಾರದ ಬಳಿಕ ಭೇಟಿಯಾಗಲು ಸೂಚಿಸಿರುವ ಹಿನ್ನೆಲೆಯಲ್ಲಿ ಈ ಜ.14ರ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದರು.
ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಈ ಬಗ್ಗೆ ತಿಳಿದಿದೆ. ಜ.14ರ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುವುದು ಎಂದು ಯಡಿಯೂರಪ್ಪ ಹೇಳಿದರು.
ಸಚಿವ ಸಂಪುಟ ವಿಸ್ತರಣೆಯಿಂದಾಗಿ ಹೊಸ ಶಾಸಕರು ಅಸಮಾಧಾನಗೊಂಡಿದ್ದಾರೆ ಎನ್ನುವ ಸುದ್ದಿಯನ್ನು ಅವರು ತಳ್ಳಿ ಹಾಕಿದರು.