News Karnataka Kannada
Thursday, May 09 2024
ಬೆಂಗಳೂರು ನಗರ

ಡಿಎಂಕೆಗೆ ಸೇರಿದ ಮಾಜಿ ಕೌನ್ಸಿಲರ್ ಒಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲಿನಿಂದ ಹಲ್ಲೆ

Accident Sharadhacar Bng Main 08072021
Photo Credit :

ಈರೋಡ್ : ಡಿಎಂಕೆಗೆ ಸೇರಿದ ಮಾಜಿ ಕೌನ್ಸಿಲರ್ ಒಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು,ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ವೃತ್ತಿಯಲ್ಲಿ ಟೈಲರ್ ಆಗಿದ್ದ ವಡಿವೇಲ್ (50) ಡಿಎಂಕೆ ತೊರೆದು ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದರು.

ಇದು ಮಾಜಿ ಪಾಲಿಕೆ ಸದಸ್ಯ ಈಶ್ವರಮೂರ್ತಿ ಅವರನ್ನು ಕೆರಳಿಸಿದೆ ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ಮಾತಿನ ಚಕಮಕಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ವಡಿವೇಲ್ ತನ್ನ ಸ್ನೇಹಿತರೊಂದಿಗೆ ಗುರುವಾರ ಇಲ್ಲಿನ ತಾಳವುಮಲೈನಲ್ಲಿ ನಿಂತಿದ್ದಾಗ ಈಶ್ವರಮೂರ್ತಿ ವಾಗ್ವಾದಕ್ಕಿಳಿದು ವಡಿವೇಲ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ವಡಿವೇಲ್‌ಗೆ ಗಾಯಗಳಾಗಿ ಕೆಳಗೆ ಬಿದ್ದಿದ್ದಾರೆ. ಸ್ನೇಹಿತರು ವಡಿವೇಲರನ್ನು ರಕ್ಷಿಸಿ ನೀರು ಕೊಟ್ಟು ಮನೆಗೆ ಕರೆದೊಯ್ದಿದ್ದರು. ಮನೆಯಲ್ಲಿ ಮಲಗಿದ್ದವರು ಇಂದು ಬೆಳಗ್ಗೆ ಶವವಾಗಿ ಬಿದ್ದಿರುವುದನ್ನು ಅವರ ಪತ್ನಿ ಕಂಡಿದ್ದಾರೆ.

ಅವರು ಪೊಲೀಸರಿಗೆ ದೂರು ನೀಡಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ. ಸಾವಿನ ಸುದ್ದಿ ತಿಳಿದ ಬಿಜೆಪಿ ಕಾರ್ಯಕರ್ತರು ಈಶ್ವರಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಮರಣೋತ್ತರ ಪರೀಕ್ಷೆ ವರದಿ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು