ನೀರಾವರಿ ಇಲಾಖೆಯಲ್ಲಿ ಪರ್ಸೆಂಟೇಜ್ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಬಗ್ಗೆ ಪಕ್ಷದ ಇನ್ನೊಬ್ಬ ಮುಖಂಡ ವಿ.ಎಸ್. ಉಗ್ರಪ್ಪ ಜೊತೆ ಖಾಸಗಿಯಾಗಿ ಸಲೀಂ ಮಾತನಾಡಿರುವುದು ಬುಧವಾರ ವೈರಲ್ ಆಗಿತ್ತು. ಆ ಬಳಿಕ ಸಲೀಂ ಎಲ್ಲೂ ಕಾಣಿಸಿಕೊಂಡಿರಲಿಲ್ಲ.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸಲೀಂ, ‘ಡಿ.ಕೆ. ಶಿವಕುಮಾರ್ ಅವರು ಏನೇ ಶಿಕ್ಷೆ ಕೊಡಲಿ. ಅವರು ನನ್ನನ್ನು ಬೇಕಾದರೆ ಸಾಯಿಸಲಿ. ಅದಕ್ಕೂ ಸಿದ್ಧನಿದ್ದೇನೆ’ ಎಂದು ಭಾವುಕರಾಗಿ ಹೇಳಿದರು.
‘ಡಿ.ಕೆ.ಶಿವಕುಮಾರ್ ಅವರನ್ನು ನಾನು ಭೇಟಿ ಮಾಡಿಲ್ಲ. ಯಾವ ಮುಖ ಇಟ್ಟುಕೊಂಡು ಅವರನ್ನು ಭೇಟಿ ಮಾಡಲಿ. ಅವರು ನನ್ನ ಜೊತೆ ಮಾತನಾಡಿಲ್ಲ. ನನ್ನಿಂದ ಪಕ್ಷಕ್ಕೆ, ಡಿ.ಕೆ.ಶಿವಕುಮಾರ್ ಅವರ ಇಮೇಜ್ಗೆ ಧಕ್ಕೆಯಾಗಿದೆ. ಇಷ್ಟು ವರ್ಷಗಳ ನನ್ನ ಸಾಧನೆ ಮಣ್ಣು ಪಾಲಾಯಿತು. ಕಾಂಗ್ರೆಸ್ ಪಕ್ಷ ನನ್ನನ್ನು ಆರು ವರ್ಷಗಳ ಅವಧಿಗೆ ಉಚ್ಛಾಟಿಸಿದೆ. ಆದರೂ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿಕೊಂಡು ಹೋಗುತ್ತೇನೆ’ ಎಂದರು .