ಬೆಂಗಳೂರು: ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆಗಸ್ಟ್ 11ರಂದು ರಾತ್ರಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಇದರಲ್ಲಿ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದರು.
ನಗರದ ಆಸ್ಪತ್ರೆಯೊಂದರಿಂದ ಪರಾರಿಯಾಗಿದ್ದ ಸಂಪತ್ ರಾಜ್ ನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಸಿಸಿಬಿ ಪೊಲೀಸರು ಇದರ ಬಗ್ಗೆ ಇನ್ನಷ್ಟೇ ದೃಢಪಡಿಸಬೇಕಾಗಿದೆ.
ಆಸ್ಪತ್ರೆಯಿಂದ ತಪ್ಪಿಸಿಕೊಂಡ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ಹೇಳಿಕೆಯನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿರುವರು. ಸಂಪತ್ ರಾಜ್ ಯಾರಿಗೂ ಹೇಳದೆ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.