ಬೆಂಗಳೂರು: ನಗರದಲ್ಲಿ ರಸ್ತೆ ಅವಘಡ ಸಂಭವಿಸಿದ್ದು, ಡಿವೈಡರ್ ದಾಟಿ ಹಾರಿ ಬಂದ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ನಿಖಿಲ್ ಕುಮಾರ್ ಜಿ (26) ಸಾವನಪ್ಪಿರುವ ಘಟನೆ ನಗರದ ಏರ್ಪೋರ್ಟ್ ರಸ್ತೆಯ ಫ್ಲೈಓರ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಖಾಸಗಿ ಶಾಲೆಯಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದ ನಿಖಿಲ್ ಕುಮಾರ್ ಜಿ (26) ಎಂದು ಗುರುತಿಸಲಾಗಿದೆ
ನಿಖಿಲ್ ಅವರು ಬ್ಯಾಟರಾಯನಪುರ ಫ್ಲೈಓವರ್ ಮೇಲೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಬಳ್ಳಾಪುರದಿಂದ ವೇಗವಾಗಿ ಬರುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಡಿಕ್ಕಿಹೊಡೆದಿದ. ಘಟನೆಯಲ್ಲಿ ಸಾವನ್ನಪ್ಪಿದ ನಿಖಿಲ್ ಅವರ ಮೃತದೇಹವನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಗಿತ್ತು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಸ್ ಚಾಲಕ ವೆಂಕಟೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೆ, ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯಯುತ ಚಾಲನೆ ಮಾಡಿದ ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.