ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹೆಚ್ಚುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ರಾಜಕಾರಣಿಗಳು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಡಾ. ಆಶ್ವತ್ಥ್ ನಾರಾಯಣ್ ಅವರಿಗೂ ಕೊರೋನಾ ಪಾಸಿಟಿವ್ ವರದಿ ಇಂದು ಬಂದಿದೆ.
ತಮಗೆ ಕೊರೋನಾ ಸಾಂಕ್ರಮಿಕ ರೋಗ ತಗಲಿರುವ ಬಗ್ಗೆ ಸ್ವತಃ ಟ್ವೀಟ್ ಮಡಿರುವ ಉಪಮುಖ್ಯಮಂತ್ರಿ, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಅವರು ಇತ್ತೀಚೆಗೆ ನೇರ ಸಂಪರ್ಕಕ್ಕೆ ಬಂದಿರುವವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಲೋಕಸಭಾ ಕಲಾಪ ಆರಂಭಕ್ಕೂ ಮುನ್ನ ಸಂಸತ್ನಲ್ಲಿ ಪಾಲ್ಗೊಳ್ಳಲು ಬಂದು 25ಕ್ಕೂ ಹೆಚ್ಚು ಸಂಸದರಿಗೆ ಕೊರೊನಾ ಪಾಸಿಟಿವ್ ವರದಿ ಅಚ್ಚರಿ ಮೂಡಿಸಿತ್ತು.