News Karnataka Kannada
Monday, May 06 2024
ಬೆಂಗಳೂರು ನಗರ

ಡಿಸೆಂಬರ್ 31ರಂದು ಕರ್ನಾಟಕ ಬಂದ್‌: ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

Karwar: Make community health officers permanent as per central government guidelines
Photo Credit :

ಬೆಂಗಳೂರು : ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಆಗಲಿದೆ. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್‌ ಬೆಂಬಲ ನೀಡಲಿರುವ ಕನ್ನಡಪರ ಸಂಘಟನೆಗಳು
ಸುಮಾರು 35 ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸಿಗುವ ಸಾಧ್ಯತೆ ಇದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಕರ್ನಾಟಕ ಬಂದ್ಗೆ ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವತ್ತು ಯಾವುದೇ ವಾಹನ ರೋಡಿಗಿಳಿಯಲ್ಲ ಎಂದು ಮಾಹಿತಿ ನೀಡಿದ್ದಾರೆ. ಹಾಗೂ ನಮ್ಮ ಬೆಂಬಲವಿಲ್ಲ. ನಮ್ಮ ಎಲ್ಲಾ ಆಟೋ ಅಂದು ಸಂಚಾರ ಮಾಡುತ್ತೆ ಎಂದು ಪೀಸ್ ಆಟೋ ರಾಜ್ಯಾಧ್ಯಕ್ಷ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು