News Karnataka Kannada
Monday, April 29 2024
ಬೆಂಗಳೂರು ನಗರ

ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದ ರುಪ್ಸಾ

Karwar: Make community health officers permanent as per central government guidelines
Photo Credit :

ಬೆಂಗಳೂರು : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ . ರಾಜ್ಯ ಸರ್ಕಾರದ ಮೇಲೆ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸೋ ಸಲುವಾಗಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ .

ಡಿಸೆಂಬರ್ 31 ರ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಇದೀಗ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) ಕೂಡ ನೈತಿಕ ಬೆಂಬಲ ನೀಡಿದೆ. ರಾಜ್ಯದಲ್ಲಿ ಡಿಸೆಂಬರ್ 31 ರಂದು ಖಾಸಗಿ ಶಾಲೆಗಳನ್ನು ಬಂದ್ ಮಾಡುವ ಮೂಲಕ ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡುತ್ತೇವೆ. ಆದರೆ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಇರುತ್ತದೆ ಎಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳೀಕಟ್ಟೆ ಹೇಳಿದ್ದಾರೆ.

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಇಂದು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ , ಕನ್ನಡಪರ ಹೋರಾಟಗಾರ ಸಾರಾ ಗೋವಿಂದ್ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳಿಂದ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ಮೇಲೆ ಎಂಇಎಸ್ ನಿಷೇಧಿಸುವಂತೆ  ಒತ್ತಾಯಿಸೋ ಸಲುವಾಗಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಬೆಳಗಾವಿಯಲ್ಲಿ ನಮ್ಮ ಕಣ್ಮುಂದೆಯೇ ಕನ್ನಡ ಭಾವುಟಕ್ಕೆ ಬೆಂಕಿ ಇಟ್ಟಿದ್ದಾರೆ. ಇದು ಕನ್ನಡಿಗರಿಗೆ, ಕನ್ನಡ ಭಾಷೆಗೆ ಬೆಂಕಿ ಇಟ್ಟಂತೆ. ಇದನ್ನು ನಾವು ಸಹಿಸೋದಿಲ್ಲ. ಉದ್ಧವ್ ಠಾಕ್ರೆ ರಾಜ್ಯದಲ್ಲಿ ಬಾಲ ಬಿಚ್ಚುವಂತಿಲ್ಲ. ಮಹಾರಾಷ್ಟ್ರದಲ್ಲಿ ಇವರು ಬಾಲ ಬಿಚ್ಚಲಿ. ರಾಜ್ಯದಲ್ಲಿ ಎಂಇಎಸ್ ಪುಂಡಾಟದ ವಿರುದ್ಧ ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಇಳಿಯಲಿವೆ. ಅದಕ್ಕೂ ಮುನ್ನಾ ಸಿಎಂ ಎಚ್ಚೆತ್ತುಕೊಳ್ಳಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು