ಬೆಂಗಳೂರು: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ ಯೂನಿವರ್ಸಿಟಿ ಕ್ಯಾಂಪಸ್ ನಿರ್ಮಿಸಲಾಗಿದೆ. ಡಿಸೆಂಬರ್ 6ರಂದು ಪ್ರಧಾನಿಯವರು ಲೋಕಾರ್ಪಣೆ ಮಾಡಲಿದ್ದಾರೆ.
ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಸಚಿವರಾದ ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ್ ಗುಪ್ತ, ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಉಪಸ್ಥಿತರಿದ್ದರು.