News Karnataka Kannada
Sunday, April 28 2024
ಬೆಂಗಳೂರು ನಗರ

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲು

Dkshi Siddaramayya
Photo Credit :

ಬೆಂಗಳೂರು : ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಐಪಿಸಿ ಸೆಕ್ಷನ್ 141, 143, 290, 336 ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಿಯಮ ಉಲ್ಲಂಘಿಸಿದ ಎಲ್ಲರ ಮೇಲೂ ಕೇಸ್ ದಾಖಲಿಸಲಾಗಿದೆ. ಪಾದಯಾತ್ರೆ ಚಾಲನೆ ನೀಡಲು ವೇದಿಕೆ ಮೇಲೆ ಇದ್ದ ಎಲ್ಲಾ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದರು.

ಕೋವಿಡ್ ನಿಯಂತ್ರಣಕ್ಕೆ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ನಿಯಮ ಜಾರಿಗೆ ತಂದಿದ್ದರೂ ವಿಪಕ್ಷದ ಸ್ಥಾನದಲ್ಲಿದ್ದವರು ಉದ್ದೇಶಪೂರ್ವಕವಾಗಿ ಪಾದಯಾತ್ರೆ ಹೆಸರಲ್ಲಿ ನಿಯಮ ಉಲ್ಲಂಘಿಸಿದ್ದೂ ಅಲ್ಲದೇ ಜನರ ಹಿತದ ಬಗ್ಗೆ ಬೇಜವಾಬ್ದಾರಿ ತೋರಿರುವುದು ಸರಿಯಲ್ಲ. ಕಾನೂನು ಎಲ್ಲರಿಗೂ ಒಂದೇ ಅವರು ಎಷ್ಟೇ ದೊಡ್ಡ ಲೀಡರ್ ಆಗಿದ್ದರೂ ಸರಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು