News Karnataka Kannada
Monday, April 29 2024
ಬೆಂಗಳೂರು ನಗರ

ಡಿ. 4-5ರಂದು ಸಾವಯವ ಮತ್ತು ಸಿರಿಧಾನ್ಯ ಮೇಳ

Foodgrain
Photo Credit :

ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.

ರೈತರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ಏರ್ಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಸಹಯೋಗದೊಂದಿಗೆ ಡಿ. 4 ಮತ್ತು 5 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆ.ಎ.ಎಸ್. ಅಧಿಕಾರಿಗಳ ಸಂಘದಲ್ಲಿ ಮೇಳ ಆಯೋಜನೆಗೊಂಡಿದೆ.

ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದು, ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ, ಸಾವಯವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ. ಇದರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ.

ಸಾವಯವ ಪದಾರ್ಥಗಳನ್ನು ಉಪಯೋಗಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ.

ಈ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತಿ ಉಪಯುಕ್ತ ಸಿರಿಧಾನ್ಯ ಮತ್ತು ದವಸ ಧಾನ್ಯ ಬೆಳೆಗಳ ಉಪಯೋಗದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೆ ಇವುಗಳ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು