News Karnataka Kannada
Sunday, April 28 2024
ಬೆಂಗಳೂರು ನಗರ

ತಜ್ಞರ ಜತೆ ಚರ್ಚಿಸಿ ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳುತೇವೆ : ಸಿಎಂ ಬಸವರಾಜ ಬೊಮ್ಮಾಯಿ

Cm Bommayi
Photo Credit : News Kannada

ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳುತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮಧ್ಯಭಾಗದಲ್ಲಿ ಪೀಕ್‍ಗೆ ಹೋಗುತ್ತೆ ಅಂತ ಬೇರೆ ಬೇರೆ ದೇಶಗಳ ಟ್ರೆಂಡ್ ನೋಡಿ ಅಂದಾಜು ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡುತ್ತಿದ್ದಾರೆ.ಜನವರಿ ಅಂತ್ಯಭಾಗದಿಂದ ಫೆಬ್ರವರಿ ಮಧ್ಯಭಾಗದವರೆಗೂ ಕೋವಿಡ್ ಹೆಚ್ಚಾಗುತ್ತೆ ಅಂತ ತಜ್ಞರು ಅಂದಾಜು ಮಾಡಿದ್ದಾರೆ. ಕಾಂಗ್ರೆಸ್ ನವರು ದೂರು ಕೊಡುವ ಅಗತ್ಯ ಇಲ್ಲ, ಯಾರೇ ಕೋವಿಡ್ ನಿಯಮ ಉಲ್ಲಂಘಿಸಿದರೂ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವ ಖಡಕ್ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು