ಬೆಂಗಳೂರು : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಸಚಿವ ಬಿಸಿ. ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೊರೊನಾ ವೈರಸ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ . ಈ ಕುರಿತು ಶುಕ್ರವಾರ ತಜ್ಞರ ಸಮಿತಿ ಜೊತೆಗೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ .
ಮಕ್ಕಳ ಮೇಲೆ ಓಮಿಕ್ರಾನ್ ರೂಪಾಂತರದ ಕಡಿಮೆ ಪರಿಣಾಮವನ್ನು ಸೂಚಿಸುವ ದತ್ತಾಂಶದ ಆಧಾರದ ಮೇಲೆ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ . ತಜ್ಞರ ಸಮಿತಿ ನೀಡುವ ಸಲಹೆಗಳ ಮೇರೆಗೆ ಶಾಲೆ ಪುನರಾರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.