ನವದೆಹಲಿ: ತಮಿಳುನಾಡಿಗೆ ನಿಗದಿಯಾಗಿರುವಂತೆ ನೀರು ಬಿಡಬೇಕು ಎಂದು ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಅವರು ಆದೇಶಿಸಿದ್ದಾರೆ.
ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಪ್ರಾಧಿಕಾರವು ಆದೇಶ ನೀಡಿದೆ. ಈ ಮೂಲಕ ರಾಜ್ಯಕ್ಕೆ ಭಾರೀ ಹಿನ್ನಡೆಯಾಗಿದೆ.
ರಾಜ್ಯದಲ್ಲಿ ಬರಗಾಲ ಎದುರಾಗಿದೆ ಮತ್ತು ಎಲ್ಲಾ ಜಲಾಶಯಗಳಲ್ಲಿ ನಿಗದಿಗಿಂತಲೂ ಕಡಿಮೆ ನೀಡಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಆದೇಶ ನೀಡಿರುವುದು ಅವೈಜ್ಞಾನಿಕವಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.