ಬೆಂಗಳೂರು: ಅನಾಥ ಯುವಕನೊಬ್ಬನಿಗೆ ಮನೆಯಲ್ಲಿ ಆಶ್ರಯ ನೀಡಿದ್ದಕ್ಕೆ ಮಹಿಳೆ ಹಾಗೂ ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ 6 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.
ಜನವರಿ. 15 ರಂದು ನಂದಿನ ಲೇಔಟ್ ನಲ್ಲಿ ನಡೆಸಿದಿದ್ದ ಪ್ರಕರಣ ಸಂಬಂಧ ಮಹಿಳೆಯರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.ಬಂಧಿತರನ್ನು ಖಾಸೀಮ್ (32), ಯಾಸಿನ್ ತಾಜ್ (34), ಇಂದ್ರಮ್ಮ (52), ಇಮ್ರಾನ್ ಪಾಷಾ (28), ಜಬಿ ಉಲ್ಲಾಹ್ (33) ಎಂದು ಗುರ್ತಿಸಲಾಗಿದ್ದು ಮತ್ತೊಬ್ಬರ ಹೆಸರನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.
ಸಂತ್ರಸ್ಥ ಮಹಿಳೆಯರು ಅನಾಥ ಯುವಕನೊಬ್ಬನಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಯುವಕ ಆರೋಪಿಗಳ ಮನೆಯಲ್ಲಿದ್ದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಮಗರ ಪ್ರೀತಿಗೆ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜನವರಿ 15 ರಂದು ಪ್ರೇಮಿಗಳಿಬ್ಬರು ಮನೆಬಿಟ್ಟು ಹೋಗಿದ್ದಾರೆ.ಇದಕ್ಕೆ ತೀವ್ರವಾಗಿ ಕೆಂಡಾಮಂಡಲವಾಗಿರುವ ಯುವತಿಯ ಮನೆಯವರು ಆಶ್ರಯ ನೀಡಿದ್ದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮೃಗೀಯ ರೀತಿಯಲ್ಲಿ ವರ್ತಿಸಿದ್ದಾರೆ.