ಬೆಂಗಳೂರು: ತೆರಿಗೆ ವಂಚನೆ ಆರೋಪದ ಪ್ರಕರಣ ಸಂಬಂಧ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಧೀಶ ಎಂ.ಎಸ್. ಆಳ್ವಾ ಜಾಮೀನು ಮಂಜೂರು ಮಾಡಿದ್ದಾರೆ. ರೂ. 25000 ಭದ್ರತ ಠೇವಣಿ ಇಡುವುದು, ಸಾಕ್ಷ್ಸ ನಾಶ ಮಾಡದಂತೆ, ಸಾಕ್ಷಿದಾರರ ಮೇಲೆ ಒತ್ತಡ ಹೇರದಂತೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ನ್ಯಾಯಧೀಶ ಎಂ.ಎಸ್. ಆಳ್ವಾ ಜಾಮೀನು ಮಂಜೂರು ಮಾಡಿದ್ದಾರೆ.
ಗುರುವಾರ ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ,ಸುರೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.