ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿದ್ದರು ನಿಯಮ ಉಲ್ಲಂಘಿಸಿ ಅನೇಕರು ವಾಹನಗಳನ್ನು ರಸ್ತೆ ಗಳಿಸಿರುವ ಪರಿಣಾಮ ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದರು. ಈಗ ಅವುಗಳನ್ನು ಬಿಡುಗಡೆ ಮಾಡಲು ಹೊಸ ನಿಯಮ ಬಂದಿದೆ.
ವಾಹನಗಳನ್ನು ಬಿಡುಗಡೆ ಮಾಡಲು ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಅಧಿಕಾರ ನೀಡಿದ್ದು, ಲಾಕ್ಡೌನ್ ಸಂದರ್ಭದಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಠಾಣೆ ಹಂತದಲ್ಲಿಯೇ ದಂಡವನ್ನು ಕಟ್ಟಿಸಿಕೊಂಡು ಬಿಡುಗಡೆ ಮಾಡಿ. ಅವುಗಳನ್ನು ನ್ಯಾಯಲಯದ ತನಕ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ ಎಂದು ಸೂಚನೆ ನೀಡಿದೆ.
ರಾಜ್ಯಾದ್ಯಂತ ಬೈಕ್, ಕಾರು, ಆಟೋ ಸೇರಿ ಸುಮಾರು 1.50 ಲಕ್ಷ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 14ರ ಮುಂಜಾನೆ 6 ಗಂಟೆಯ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ.ಎಲ್ಲಾ ವಾಹನಗಳ ಮಾಲೀಕರು ಅದನ್ನು ಬಿಡಿಸಿಕೊಳ್ಳಲು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಆಗಮಿಸಿದರೆ ಜನಜಂಗುಳಿ ಏರ್ಪಡಲಿದೆ. ವಾಹನಗಳನ್ನು ನಿಲ್ಲಿಸಲು ಸಹ ಸ್ಥಳಾವಕಾಶದ ಕೊರತೆ ಎದುರಾಗಲಿದೆ. ಠಾಣೆ ಹಂತದಲ್ಲೇ ಅವುಗಳನ್ನು ಬಿಡುಗಡೆಗೊಳಿಸಲು ಅವಕಾಶ ನೀಡಿ ಎಂದು ವಕೀಲರೊಬ್ಬರು ಅರ್ಜಿ ಹಾಕಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಎಲ್ಲಾ ವಾಹನಗಳಿಗೆ ನಿಗದಿತ ದಂಡ ಪಾವತಿಸಿಕೊಂಡು ಠಾಣೆ ಹಂತದಲ್ಲಿಯೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿತು.