News Karnataka Kannada
Monday, May 13 2024
ಬೆಂಗಳೂರು ನಗರ

ದಕ್ಷಿಣ ಕನ್ನಡ ಸಹಿತ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Photo Credit :

ದಕ್ಷಿಣ ಕನ್ನಡ ಸಹಿತ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಭಾರತದ ಹವಮಾನ ಇಲಾಖೆಯ ವರದಿಯ ಪ್ರಕಾರ ದಕ್ಷಿಣ ಒಳನಾಡು ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ  ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಭಾಗದಲ್ಲಿ ಸೆ. 10 ರಿಂದ 14ರ ವರೆಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ  ಜಿಲ್ಲೆಯ ಕೆಲವು ಭಾಗದಲ್ಲಿ 20 ಸೆ.ಮೀ ಗಿಂತಲು ಹೆಚ್ಚು  ಮಳೆಯಾಗುವ ಸಾಧ್ಯತೆಯಿದೆ. ಸೆ. 10 ಮತ್ತು 11 ರಂದು ಈ ಪ್ರದೇಶದಲ್ಲಿ ರೆಡ್ ಅಲರ್ಟ್, ಸೆ. 12ರಂದು ಆರೆಂಜ್ ಅಲರ್ಟ್ ಹಾಗೂ 13, 14 ರಂದು ಯಲ್ಲೋ ಅಲರ್ಟ್ ನ್ನು  ಘೋಷಿಸಲಾಗಿದೆ.

ಈ ನಡುವೆ ಸೆ. 10 ಮತ್ತು 11 ರಂದು ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ವರದಿ ತಿಳಿಸಿದೆ.  ಹಾಗೆಯೇ ಸೆ.14ರವರೆಗೆ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸೆ. 10ರಿಂದ 14 ರವರೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಬಿದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ 10 ರಿಂದ 13ರ ವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇರುದರಿಂದ ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ  10 ಮತ್ತು 11ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಗಾಳಿಯು  ಗಂಟೆಗೆ 45ರಿಂದ 55 ಕಿ. ಮೀ ವೇಗದಲ್ಲಿರುದರಿಂದ  ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು