ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಲೇ ಬೇಕು. ದಯವಿಟ್ಟು ವಿದ್ಯೆಯ ಕಡೆಗೆ ಗಮನಕೊಡಿ, ವಸ್ತ್ರದ ಕಡೆಗಲ್ಲ. ಪೋಷಕರು ವಿದ್ಯಾರ್ಥಿಗಳನ್ನು ಈ ನಿಟ್ಟಿನಲ್ಲಿ ಮನವೊಲೀಸಬೇಕು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಪೋಷಕರು ಮನವೊಲಿಸಬೇಕು, ಕೋರ್ಟ್ ಆದೇಶ ಪಾಲಿಸುವಂತೆ ಸೂಚಿಸಬೇಕು, ಶಾಲಾ ಆಡಳಿತ ಮಂಡಳಿಗಳು ಕೂಡ ವಿದ್ಯಾರ್ಥಿಗಳನ್ನು ಮನವೊಲೀಸಬೇಕು ಎಂದರು.
ಹೈಕೋರ್ಟ್ ಆದೇಶದಂತೆ ಸಮವಸ್ತ್ರವನ್ನು ಧರಿಸಬೇಕು. ಯಾವುದೇ ವಿದ್ಯಾರ್ಥಿಗಳು ಧಾರ್ಮಿಕ ವಸ್ತ್ರಗಳನ್ನು ಧರಿಸಬಾರದು. ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ. ವಿದ್ಯೆ ಕಡೆಗೆ ಗಮನ ಕೊಡಿ, ವಸ್ತ್ರದ ಕಡೆಗೆ ಅಲ್ಲ ಎಂಬುದಾಗಿ ಮನವಿ ಮಾಡಿದ್ದಾರೆ.