ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸಾರಾ ಉದ್ಘಾಟನೆಗೆ ಬರುವಂತೆ ಇನ್ಫೋಸಿಸ್ ಫೌಂಡೇಶನ್ ಡಾ.ಸುದಾಮೂರ್ತಿಯವರಿಗೆ ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಇಂದು ಬೆಂಗಳೂರಿನ ಡಾ.ಸುಧಾಮೂರ್ತಿಯವರ ಮನೆಗೆ ಮೈಸೂರು ಜಿಲ್ಲಾಡಳಿತ ಹಾಗೂ ದಸರಾ ಸಮಿತಿಯ ವತಿಯಿಂದ ಉದ್ಘಾಟನೆಗೆ ಬರುವಂತೆ ಅಧಿಕೃತವಾಗಿ ಇನ್ಫೋಸಿಸ್ ಫೌಂಡೇಶನ್ ಡಾ.ಸುಧಾಮೂರ್ತಿಯವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಜಿಲ್ಲಾಡಳಿತದ ವತಿಯಿಂದ ಮೈಸೂರು ಪೇಟ ಹಾಗೂ ಫಲ ತಾಂಬೂಲಗಳನ್ನು ನೀಡಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋಧ್ಯಮ ಸಚಿವ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಶಾಸಕ ಹೆಚ್.ವಿಶ್ವನಾಥ್ ಹಗೂ ಮೈಸೂರು ಜಿಲ್ಲಾಧಿಕಾರಿ ಅಭಿರಾಂ.ಜಿ.ಶಂಕರ್ ಅಧಿಕೃತವಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದರು.