ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಿಎಂಟಿಸಿ ಬಸ್ ದಿಢೀರನೆ ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸುಮಾರು 30 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹೊಸಕೆರೆಹಳ್ಳಿಯಿಂದ ಕೆಆರ್.ಮಾರುಕಟ್ಟೆಗೆ ಬರುತ್ತಿದ್ದ ಕೆಎ57-ಎಫ್ 1592 ನಂಬರ್ ನ ಬಿಎಂಟಿಸಿ ಬಸ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ.
ಬಸ್ ನಲ್ಲಿದ್ದ ಪಸ್ಟ್ ಏಡ್ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಕೂಡಾ ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಯ ಪ್ರವೃತ್ತರಾದ ಚಾಲಕ ಹಾಗೂ ನಿರ್ವಾಹಕ ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಲ್ಲದೇ ಪ್ರಯಾಣಿಕರನ್ನ ಕೆಳಗಿಳಿಸಿ ಬೇರೆ ಬಸ್ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಸಮಯಪ್ರಜ್ಞೆ ಮೆರೆದಿದ್ದಾರೆ.