ಬೆಂಗಳೂರು: ದೇಶದೊಳಗೆ ದುಷ್ಕೃತ್ಯ ಎಸಗಲು ಕೆಲ ಶಂಕಿತರು ಸಂಚು ರೂಪಿಸಿದ್ದು ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಈ ಸಂಬಂಧ ಡಿಜಿಪಿ ನೀಲಮಣಿ ರಾಜು ಅವರು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತುರ್ತು ಸಂದೇಶವನ್ನು ಕಳುಹಿಸಿದ್ದಾರೆ. ತಮ್ಮ ಕಾರ್ಯವ್ಯಾಪ್ತಿಯಲ್ಲಿರುವ ಭದ್ರತೆಯನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳನ್ನು ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.