News Karnataka Kannada
Sunday, April 28 2024
ಬೆಂಗಳೂರು ನಗರ

ಧ್ವನಿವರ್ಧಕ ಅಳವಡಿಕೆ: ಕೋರ್ಟ್‌ ತೀರ್ಪನ್ನು ಎಲ್ಲರೂ ಪಾಲಿಸಬೇಕು- ಶಶಿಕಲಾ ಜೊಲ್ಲೆ

Shashikala Jolle
Photo Credit :

ಬೆಂಗಳೂರು: ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ ಅಳವಡಿಕೆ ವಿಚಾರ ಕುರಿತು ರಾಜ್ಯಾದ್ಯಂತ ವಿವಾದ ಭುಗೆಲೆದ್ದಿದ್ದು, ಈ ಬಗ್ಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿ, 2002 ರಲ್ಲೇ ಧಾರ್ಮಿಕ ಕ್ಷೇತ್ರಗಳಲ್ಲಿ ಎಷ್ಟು ಡೆಸಿಬಲ್ ಮೈಕ್ ಹಾಕಬೇಕು ಅಂತ ಕೋರ್ಟ್ ಹೇಳಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್‌ ಸುತ್ತೊಲೆ ಹೊರಡಿಸಿರುವುದು ನಮಗೆ ಅನ್ವಯ ಆಗುತ್ತದೆ. ತೀರ್ಪನ್ನು ಎಲ್ಲರೂ ಪಾಲಿಸಬೇಕು. ಪೊಲೀಸ್ ಇಲಾಖೆ, ಪರಿಸರ ಮಾಲಿನ್ಯ ಇಲಾಖೆ ಕ್ರಮಕೈಗೊಳ್ಳುತ್ತದೆ. ಈ ತೀರ್ಪು ಕೇವಲ ಮಸೀದಿ ಮಾತ್ರವಲ್ಲ, ನಮ್ಮ ದೇವಸ್ಥಾನಕ್ಕೂ ಅನ್ವಯ ಆಗುತ್ತದೆ ಎಂದರು.

ದೇವಾಲಯಗಳಲ್ಲಿ ಬೆಳಿಗ್ಗೆ ಸುಪ್ರಭಾತ, ಮಸೀದಿಗಳಲ್ಲಿ ಅಜಾನ್ ನಡೆಯುತ್ತದೆ. ಅದಕ್ಕೆ ನಿಗದಿತ ಸಮಯ ಇರುತ್ತದೆ. ಅದರಂತೆ ಪಾಲನೆ ಮಾಡುತ್ತಾರೆ. ರಾತ್ರಿ, ಹಗಲು‌ ಧ್ವನಿವರ್ಧಕ ಹಾಕುವುದು ತಪ್ಪಾಗುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು