ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಮುದ್ರಿಸಿದ ಕೆಎಂಎಫ್

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ನಟ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಮುದ್ರಿಸುವ ಮೂಲಕ ಕೆಎಂಎಫ್​ ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದೆ.

ಹಲವು ಇಲಾಖೆಗಳ ರಾಯಭಾರಿಯಾಗಿದ್ದ ನಟ ಪುನೀತ್​ ರಾಜ್​ಕುಮಾರ್​ ಅವರು ನಂದಿನಿ ಉತ್ಪನ್ನಗಳ ಜಾಹೀರಾತಿಗೆ ಬಿಡಿಗಾಸನ್ನೂ ಪಡೆದಿರಲಿಲ್ಲ.

ಉಚಿತವಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕೆಎಂಎಫ್ ಉತ್ಪನ್ನಗಳಿಗೆ ಪ್ರಚಾರ ನೀಡಿ ಹಾಲು ಒಕ್ಕೂಟದ ರಾಯಭಾರಿಯಾಗಿ ರೈತಾಪಿ ಸಮೂಹದ ಮೆಚ್ಚುಗೆ ಗಳಿಸಿದ್ದರು.

ಕೆಎಂಎಫ್​ ಉತ್ಪನ್ನದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಅಪ್ಪು, ಹಣ ಪಡೆಯುತ್ತಿರಲಿಲ್ಲ. ಅಪ್ಪು ನಿಧನ ಸುದ್ದಿ ಇಡೀ ಕರುನಾಡಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿತ್ತು. ಅಪ್ಪು ನಮ್ಮನ್ನಗಲಿ 2 ತಿಂಗಳು ಕಳೆದರೂ ಆ ನೋವು ಇನ್ನೂ ಹಸಿಯಾಗೆ ಇದೆ. ಅಪ್ಪು ಅವರ ಕೋಟ್ಯಂತರ ಅಭಿಮಾನಿಗಳು ನೆಚ್ಚಿನ ನಟನ ಹೆಸರಲ್ಲಿ ವಿಭಿನ್ನ ಕಾರ್ಯಕ್ರಮ ನಡೆಸುತ್ತಲೇ ಇದ್ದಾರೆ. ಇದೀಗ ಕೆಎಂಎಫ್​ ಹಾಲಿನ ಪ್ಯಾಕೆಟ್​ನಲ್ಲಿ ಅಪ್ಪು ಭಾವಚಿತ್ರ ಮುದ್ರಿಸಿ ನಮನ ಸಲ್ಲಿಸಿರುವುದನ್ನು ಕಂಡ ನಾಡಿನ ಜನತೆ ಭಾವುಕರಾಗಿದ್ದಾರೆ.

Sneha Gowda

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 min ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

35 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

47 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

1 hour ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago