News Karnataka Kannada
Thursday, May 09 2024
ಬೆಂಗಳೂರು ನಗರ

ನಗರ, ಪಟ್ಟಣ ವಾಸಿಗಳು ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ : ಡಿ.ಕೆ. ಶಿವಕುಮಾರ್

D K Shivakumar
Photo Credit :

ಬೆಂಗಳೂರು: ರಾಜ್ಯದ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಸ್ಪಷ್ಟ ನಿದರ್ಶನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ ಎಂದು ಗುರುವಾರ ಅವರು ಪ್ರತಿಕ್ರಿಯೆ ನೀಡಿದರು.

ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ಇದೆ ಎಂಬುದಕ್ಕೆ ಸಾಕ್ಷಿ. ಇನ್ನೂ ಫಲಿತಾಂಶ ಬರುವುದು ಬಾಕಿ ಇದೆ. ಪೂರ್ಣ ಫಲಿತಾಂಶ ಬಂದ ನಂತರ ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ ಎಂದು ಹೇಳಿದರು.

ಇದು ಮುಂಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ, ‘ಮಾಧ್ಯಮಗಳೇ ಇದನ್ನು ವಿಮರ್ಶೆ ಮಾಡಲಿ. ಆಡಳಿತ ಪಕ್ಷವಿದ್ದರೂ, ಶಾಸಕರು, ಮಂತ್ರಿಗಳ ಕ್ಷೇತ್ರದಲ್ಲಿ ಏನೇನಾಗಿದೆ, ಜನ ಯಾವ ರೀತಿ ತೀರ್ಪು ನೀಡುತ್ತಿದ್ದಾರೆ ಎಂಬುದನ್ನು ನೋಡಿ. ಜನರ ತೀರ್ಪನ್ನು ನಿರ್ಲಕ್ಷಿಸಿ ಸಬೂಬು ಹೇಳಲು ಬಿಜೆಪಿಗೆ ಸಾಧ್ಯವಿಲ್ಲ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದು, ಅವರ ನಿರೀಕ್ಷೆಯಂತೆ ನಡೆಯಬೇಕಾಗುತ್ತದೆ’ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು