ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮತಗಳನ್ನು ಅಷ್ಟು ಸುಲಭವಾಗಿ ಒಡೆಯಲು ಸಾಧ್ಯವಿಲ್ಲ ಎಂಬುದಾಗಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆತ್ಮಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಣ್ಣ ಮಾತನ್ನಾಡಿದ್ದಾರೆ. ನಮ್ಮ ಪಕ್ಷದ ಶಾಸಕರಿಗೂ ಆತ್ಮಸಾಕ್ಷಿ ಇದೆ. ನಮ್ಮ ಶಾಸಕರ ಮತಗಳನ್ನು ಒಡೆಯಲು ಸಾಧ್ಯವಿಲ್ಲ. ಒಂದಿಬ್ಬರು ಶಾಸಕರಲ್ಲಿ ಅಸಮಾಧಾನ ಇರಬಹುದು. ಈಗ ಎಲ್ಲವೂ ಬಗೆಹರಿದಿದೆ ಎಂದರು.
ಐದಾರು ದಿನಗಳ ಹಿಂದೆ ಇಂದಿಗೂ ಜೆಡಿಎಸ್ ಚಿನ್ಹೆ ಮೇಲೆ ಗೆದ್ದಿದ್ದೇನೆ ಅಂತಾ ಜಿ.ಟಿ ದೇವೇಗೌಡ ಹೇಳಿದ್ದಾರೆ. ಹಾಗಾಗಿ ಪಕ್ಷದ ಶಾಸಕರ ಮತಗಳು ಬೇರೆ ಕಡೆ ಹೋಗೋದಿಲ್ಲ. ಕಾಂಗ್ರೆಸ್ ನಿಂದ ನಮ್ಮ ಪಕ್ಷದ ಮತಗಳನ್ನು ಸೆಳೆಯಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದರು.