ಬೆಂಗಳೂರು : ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎನ್ನುತ್ತಾ ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿ ಹಬ್ಬದ ಶುಭಾಶಯ ಕೋರಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ನಮ್ಮ ರಾಮ ನಾಮ ಸ್ಮರಣೆ ಮತ್ತೊಬ್ಬರಿಗೆ ತೊಂದರೆ ಉಂಟುಮಾಡಬಾರದು ಎಂದಿದ್ದಾರೆ.
ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ. ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. 1/5 pic.twitter.com/6k6uEt0Kk0
— H D Kumaraswamy (@hd_kumaraswamy) April 10, 2022