ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಆತನ ತಂಡಕ್ಕೆ ಜಾಮೀನು ನೀಡಬಾರದೆಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಕೇವಿಯಟ್ ಸಲ್ಲಿಸಿದೆ.
ಇದರಿಂದ ಜಾಮೀನು ಪಡೆಯಲು ಪ್ರಯತ್ನಿಸುತ್ತಿರುವ ನಲಪಾಡ್ ಗೆ ಮತ್ತೊಂದು ಹಿನ್ನಡೆಯಾಗಿದೆ. ಈಗಾಗಲೇ 1ನೇ ಎಸಿಎಂಎಂ ನ್ಯಾಯಾಲಯವು ನಲಪಾಡ್ ಗೆ ಎಪ್ರಿಲ್ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಹೈಕೋರ್ಟ್ ನಲ್ಲಿ ಜಾಮೀನು ನಿರಾಕರಣೆಯಾದ ಹಿನ್ನೆಲೆಯಲ್ಲಿ ನಲಪಾಡ್ ಪರ ವಕೀಲರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನಲಪಾಡ್ ಗೆ ಜಾಮೀನು ನೀಡಬಾರದೆಂದು ಸರ್ಕಾರ ಪರ ವಕೀಲರು ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.