News Karnataka Kannada
Monday, May 20 2024
ಬೆಂಗಳೂರು ನಗರ

ನಲಪಾಡ್ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

Photo Credit :

ನಲಪಾಡ್ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಎನ್. ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು 1ನೇ ಎಸಿಎಂಎಂ ಕೋರ್ಟ್ ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.

ವಿದ್ವತ್ ಲೋಗನಾಥನ್ ಎಂಬವರ ಮೇಲೆ ಫೆಬ್ರವರಿ 17ರಂದು ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಹಲ್ಲೆ ನಡೆಸಲಾಗಿತ್ತು. ವಿದ್ವತ್ ಅವರು ಗಂಭೀರವಾಗಿ ಗಾಯಗೊಂಡು ಹಲವಾರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯವು ಎಪ್ರಿಲ್ 18ರ ತನಕ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು