ಬೆಂಗಳೂರು: ತಾನು ಕುರ್ಚಿಗೆ ಅಂಟಿಕೊಂಡಿಲ್ಲ, ರಾಜೀನಾಮೆ ನೀಡಲು ಸಿದ್ಧನಿದ್ಧೇನೆ ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿದ್ದಾರೆ.
ಈ ವೇಳೆ ಅವರು ಕಾಂಗ್ರೆಸ್ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ. ಕಾಂಗ್ರೆಸ್ ನವರು ಮಿತಿ ಮೀರಿ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿದ್ಧರಾಮಯ್ಯ ಅವರೇ ನಮ್ಮ ನಾಯಕರು ಎಂದು ಕಾಂಗ್ರೆಸ್ ಶಾಸಕರು ಹೇಳಿರುವ ಬಗ್ಗೆ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದರು.