ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ನ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ ಎಂದಿದ್ದಾರೆ.
”ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ಹೇಳಿದ್ದಾರೆ”.