News Karnataka Kannada
Tuesday, May 07 2024
ಬೆಂಗಳೂರು ನಗರ

ನಾನು ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಳಿಯೂ ಹೋಗುವುದಿಲ್ಲ: ಅರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit :

ಬೆಂಗಳೂರು,ಮೇ.13:  ನಾನು ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಳಿಯೂ ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂತ್ರಿ ಸ್ಥಾನ ನೀಡಿದ್ದಾರೆ. ಕೊಟ್ಟಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ ತೃಪ್ತಿ ನನಗಿದೆ ಎಂದರು.

ಮಂತ್ರಿ ಸ್ಥಾನಕ್ಕಾಗಿ ನಾನು ಯಾರ ಮನೆಗೂ ಹೋದವನಲ್ಲ. ಮುಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಇರಲಿ, ಬಿಡಲಿ ಪಕ್ಷ ಹಾಗೂ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ದನಾಗಿ ಇರುತ್ತೇನೆ ಎಂದು ತಿಳಿಸಿದರು.

ನಾನು ವೈಯಕ್ತಿಕ ಕಾರಣಗಳಿಗಾಗಿ ದೆಹಲಿಗೆ ಹೋಗಿದ್ದೆ. ದೆಹಲಿಯಲ್ಲಿ ತುರ್ತಾಗಿ ಭೇಟಿಯಾಗಬೇಕಾಗಿದ್ದರಿಂದ ಹೋಗಬೇಕಾಯಿತು. ಉಳಿದಂತೆ ಪಕ್ಷದ ವರಿಷ್ಠರನ್ನಾಗಲಿ, ಯಾವುದೇ ಮುಖಂಡರನ್ನೂ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪಿಎಸ್‍ಐ ಅಕ್ರಮ ನೇಮಕಾತಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖಾ ತಂಡ ಪ್ರಕರಣದಲ್ಲಿ ಭಾಗಿಯಾಗಿರುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಕೆಲವು ಮಹತ್ವದ ವಿಷಯಗಳು ಲಭ್ಯವಾಗಿವೆ. ಮುಂದಿನ ದಿನಗಳಲ್ಲಿ ಇದರಲ್ಲೇ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ ಎಂದು ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಸಿಐಡಿ ತಂಡಕ್ಕೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಇದರಂತೆ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದೇವೆ. ಯಾರನ್ನೂ ಕೂಡ ರಕ್ಷಣೆ ಮಾಡುವುದಾಗಲಿ ಇಲ್ಲವೇ ಬೇರೊಬ್ಬರನ್ನು ಗುರಿಯಾಗಿಟ್ಟುಕೊಂಡು ವಿಚಾರಣೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು