ಬೆಂಗಳೂರು: ಪೋಲೆಂಡ್ ರಾಜಧಾನಿ ವಾರ್ಸಾದಿಂದ ಉಕ್ರೇನ್ ನಲ್ಲಿ ಬಲಿಯಾದ ಹಾವೇರಿಯ ನವೀನ್ ಮೃತದೇಹವನ್ನು ಭಾರತಕ್ಕೆ ರವಾನಿಸಲಾಗಿದೆ. ಸೋಮವಾರ ಬೆಳಗಿನ ಜಾವ ನವೀನ್ ಮೃತದೇಹ ಬೆಂಗಳೂರಿಗೆ ತಲುಪಲಿದೆ.
ಅಗತ್ಯ ದಾಖಲೆ ಪರಿಶೀಲನೆ ನಂತರ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗೆ ಶುಕ್ರವಾರ ಮೃತದೇಹ ಹಸ್ತಾಂತರ ಮಾಡಲಾಗಿದೆ.
ಮೃತದೇಹ ಹೊತ್ತ ಎಮಿರೆಟ್ಸ್ ವಿಮಾನ ದುಬೈ ತಲುಪಿದ್ದು, ಅಲ್ಲಿಂದ ಮತ್ತೊಂದು ವಿಮಾನದಲ್ಲಿ ಬೆಂಗಳೂರಿಗೆ ಸೋಮವಾರ ಬೆಳಗಿನ ಜಾವ 3 ಗಂಟೆಗೆ ತಲುಪಲಿದೆ.
ಕುಟುಂಬದವರು ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ದಾವಣಗೆರೆ ಎಸ್ಎಸ್ ಮೆಡಿಕಲ್ ಕಾಲೇಜಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. ಮಾರ್ಚ್ 1 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಉಕ್ರೇನ್ ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟಿದ್ದರು.
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…